10:05 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ

22/12/2023, 21:43

ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು.

ಸ್ನಾತಕೋತ್ತರ ಪದವಿ ಪಡೆಯ ಬೇಕಾದರೆ ಕೇವಲ ಪ್ರವೇಶ ಗಿಟ್ಟಿಸಿದರೆ ಸಾಲದು ಪ್ರತ್ಯುತ್ಪನ್ನ ಮತಿ ಸಹಿತವಾದ ಸಾಧನೆ ಅಗತ್ಯ. ಗ್ರಂಥೋಕ್ತ ವಿಚಾರಗಳನ್ನು ದಾಖಲೀಕರಣ ಮಾಡಲು ಸರಿಯಾದ ಅನುಸಂಧಾನದ ಅಗತ್ಯವಿದೆ. ಆದ ಕಾರಣ ಯೋಗ್ಯ ಉಪದೇಶಕನ ಜೊತೆಗೆ ಪೂರ್ಣ ಪ್ರಮಾಣದ ಕ್ರಮ ಬದ್ಧವಾದ ಅನುಸಂಧಾನ ಪ್ರಕ್ರಿಯೆ ಅಗತ್ಯ. ತೌಲನಾತ್ಮಕ ಅಧ್ಯಯನ, ವೈಜ್ಞಾನಿಕ ಸಲಕರಣೆಗಳಾದ ಸಿ‌.ಟಿ.ಸ್ಕಾನ್,ಕ್ಷ ಕಿರಣ, ಲ್ಯಾಬೊರೇಟರಿ ಇತ್ಯಾದಿಗಳನ್ನು ಬಳಸಿ ಸತ್ಯಾನ್ವೇಷಣೆ ಮಾಡ ಬೇಕು.
ಎಷ್ಟೋ ಉತ್ತಮ ಅಂಶಗಳು ಅಧ್ಯಯನದ ಕೊರತೆಯಿಂದ ಮಾಸಿ ಹೋಗಿವೆ. ಅಂಥವುಗಳ ಪುನರುಜ್ಜೀವನಕ್ಕೆ ಈ ರೀತಿಯ ಅಧ್ಯಯನ ಅಗತ್ಯ ಎನ್ನುತ್ತಾ ಹಲವಾರು ಪೂರಕ ಉದಾಹರಣೆಗಳನ್ನೂ ಸ್ವರಚಿತ ಮುಕ್ತಕ ಮಾಲೆಯನ್ನೂ ವಾಚಿಸಿದರು.


ಕಾಲೇಜು ಪ್ರಾಚಾರ್ಯ ಡಾ ಸಜೀತ್ ಎಂ. ಹಾಗೂ ಸ್ನಾತಕೋತ್ತರ ಡೀನ್ ಡಾ ರವಿರಾಜ ಹೆಗ್ಡೆ ಸಹಿತ ಎಪ್ಪತ್ತು ಮಂದಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.
ಪ್ರಾಚಾರ್ಯರು ಪುಸ್ತಕ ಹಾರ ಹಾಗೂ ಶಾಲು ಹೊದೆಸಿ ಸನ್ಮಾನ ಮಾಡುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು