7:12 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮೂಡುಬಿದರೆ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಪಿಜಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ

22/12/2023, 21:43

ಮೂಡುಬಿದಿರೆ(reporterkarnataka.com): ಇಲ್ಲಿನ ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರೇರಣಾ ಕಾರ್ಯಾಗಾರ ನಡೆಯುತ್ತಿದ್ದು ಡಾ ಸುರೇಶ ನೆಗಳಗುಳಿಯವರು ಓರ್ವ ಸಂಪನ್ಮೂಲ ವ್ಯಕ್ತಿಯಾಗಿ ನಡುಹಗಲ ಕಾರ್ಯಾಗಾರ ವನ್ನು ನಡೆಸಿ ಕೊಟ್ಟರು.

ಸ್ನಾತಕೋತ್ತರ ಪದವಿ ಪಡೆಯ ಬೇಕಾದರೆ ಕೇವಲ ಪ್ರವೇಶ ಗಿಟ್ಟಿಸಿದರೆ ಸಾಲದು ಪ್ರತ್ಯುತ್ಪನ್ನ ಮತಿ ಸಹಿತವಾದ ಸಾಧನೆ ಅಗತ್ಯ. ಗ್ರಂಥೋಕ್ತ ವಿಚಾರಗಳನ್ನು ದಾಖಲೀಕರಣ ಮಾಡಲು ಸರಿಯಾದ ಅನುಸಂಧಾನದ ಅಗತ್ಯವಿದೆ. ಆದ ಕಾರಣ ಯೋಗ್ಯ ಉಪದೇಶಕನ ಜೊತೆಗೆ ಪೂರ್ಣ ಪ್ರಮಾಣದ ಕ್ರಮ ಬದ್ಧವಾದ ಅನುಸಂಧಾನ ಪ್ರಕ್ರಿಯೆ ಅಗತ್ಯ. ತೌಲನಾತ್ಮಕ ಅಧ್ಯಯನ, ವೈಜ್ಞಾನಿಕ ಸಲಕರಣೆಗಳಾದ ಸಿ‌.ಟಿ.ಸ್ಕಾನ್,ಕ್ಷ ಕಿರಣ, ಲ್ಯಾಬೊರೇಟರಿ ಇತ್ಯಾದಿಗಳನ್ನು ಬಳಸಿ ಸತ್ಯಾನ್ವೇಷಣೆ ಮಾಡ ಬೇಕು.
ಎಷ್ಟೋ ಉತ್ತಮ ಅಂಶಗಳು ಅಧ್ಯಯನದ ಕೊರತೆಯಿಂದ ಮಾಸಿ ಹೋಗಿವೆ. ಅಂಥವುಗಳ ಪುನರುಜ್ಜೀವನಕ್ಕೆ ಈ ರೀತಿಯ ಅಧ್ಯಯನ ಅಗತ್ಯ ಎನ್ನುತ್ತಾ ಹಲವಾರು ಪೂರಕ ಉದಾಹರಣೆಗಳನ್ನೂ ಸ್ವರಚಿತ ಮುಕ್ತಕ ಮಾಲೆಯನ್ನೂ ವಾಚಿಸಿದರು.


ಕಾಲೇಜು ಪ್ರಾಚಾರ್ಯ ಡಾ ಸಜೀತ್ ಎಂ. ಹಾಗೂ ಸ್ನಾತಕೋತ್ತರ ಡೀನ್ ಡಾ ರವಿರಾಜ ಹೆಗ್ಡೆ ಸಹಿತ ಎಪ್ಪತ್ತು ಮಂದಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡರು.
ಪ್ರಾಚಾರ್ಯರು ಪುಸ್ತಕ ಹಾರ ಹಾಗೂ ಶಾಲು ಹೊದೆಸಿ ಸನ್ಮಾನ ಮಾಡುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು