12:57 PM Thursday13 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಮೂಡುಬಿದರೆ: ಬಾವಿಗೆ ಹಾರಿದ ಯುವತಿಯ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ

12/10/2022, 10:50

ಮೂಡುಬಿದಿರೆ(reporterkarnataka.com):ಇಲ್ಲಿನ ವಿಶಾಲನಗರದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು, ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ್ದಾರೆ.
ವಿಶಾಲ್ ನಗರದ ನಿವಾಸಿ ತಮಿಳುನಾಡು ಮೂಲದ ರಾಬಿತ್ ಎಂಬವರ ಪುತ್ರಿ ನಿವೇತಾ(22) ಬಾವಿಗೆ ಹಾರಿದ ಯುವತಿ ಎಂದು ಗುರುತಿಸಲಾಗಿದೆ.

ಯುವತಿ ಮಂಗಳವಾರ ಬೆಳಗ್ಗೆ ಬಾವಿಗೆ ಹಾರಿದ್ದಾರೆ. ಅಕ್ಕಪಕ್ಕದವರು ಇದನ್ನು ನೋಡಿ ಮೂಡುಬಿದಿರೆ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಸ್ಟೀಫನ್ ಡಿ’ಸಿಲ್ವ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಚಾಲಕ ಕಿರಣ್ ಕುಮಾರ್ ಎಸ್., ಸಿಬ್ಬಂದಿಗಳಾದ ನವೀನ್ ರಾಜ್, ಪ್ರವೀಣ್ ಕುಮಾರ್ ದೊಡ್ಮನಿ, ಪುಂಡಲೀಕ, ಗೃಹರಕ್ಷಕ ದಳದ ಸಿಬಂದಿಗಳಾದ ಲತೀಶ್, ಸನ್ಮತ್, ಸುದರ್ಶನ್ ಅವರು ಯುವತಿಯನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ನಿವೇತಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು