11:20 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೂಡುಬಿದರೆ: ಬಾವಿಗೆ ಹಾರಿದ ಯುವತಿಯ ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ

12/10/2022, 10:50

ಮೂಡುಬಿದಿರೆ(reporterkarnataka.com):ಇಲ್ಲಿನ ವಿಶಾಲನಗರದ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು, ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ್ದಾರೆ.
ವಿಶಾಲ್ ನಗರದ ನಿವಾಸಿ ತಮಿಳುನಾಡು ಮೂಲದ ರಾಬಿತ್ ಎಂಬವರ ಪುತ್ರಿ ನಿವೇತಾ(22) ಬಾವಿಗೆ ಹಾರಿದ ಯುವತಿ ಎಂದು ಗುರುತಿಸಲಾಗಿದೆ.

ಯುವತಿ ಮಂಗಳವಾರ ಬೆಳಗ್ಗೆ ಬಾವಿಗೆ ಹಾರಿದ್ದಾರೆ. ಅಕ್ಕಪಕ್ಕದವರು ಇದನ್ನು ನೋಡಿ ಮೂಡುಬಿದಿರೆ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಸ್ಟೀಫನ್ ಡಿ’ಸಿಲ್ವ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಚಾಲಕ ಕಿರಣ್ ಕುಮಾರ್ ಎಸ್., ಸಿಬ್ಬಂದಿಗಳಾದ ನವೀನ್ ರಾಜ್, ಪ್ರವೀಣ್ ಕುಮಾರ್ ದೊಡ್ಮನಿ, ಪುಂಡಲೀಕ, ಗೃಹರಕ್ಷಕ ದಳದ ಸಿಬಂದಿಗಳಾದ ಲತೀಶ್, ಸನ್ಮತ್, ಸುದರ್ಶನ್ ಅವರು ಯುವತಿಯನ್ನು ಬಾವಿಯಿಂದ ಮೇಲಕ್ಕೆತ್ತಿ ರಕ್ಷಿಸಿದ್ದಾರೆ.

ನಿವೇತಾ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು