3:35 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ

17/04/2023, 22:42

ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.
ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ, ಮೂಡುಬಿದಿರೆ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇನೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ ಎಂದರು.
ರಾಜಕೀಯ ಗುರು ಅಭಯಚಂದ್ರರು ಕೃಷ್ಣ, ನಾನು ಅರ್ಜುನ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರ ಜೈನ್ ಅವರ ಕೊಡುಗೆ ಯಾರೂ ಮರೆಯುವಂತಿಲ್ಲ ಎಂದರು.
ಕೆಪಿಸಿಸಿ ವಕ್ತಾರ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳಿ ಮಾತನಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ’ ಮಿಥುನ್ ರೈ ಅವರನ್ನು ಮೂಡುಬಿದಿರೆಗೆ ಆರಿಸಿದ್ದು ಕೆಪಿಸಿಸಿ ಅಲ್ಲ, ಮೂಡುಬಿದಿರೆ ಜನರೇ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದ್ದಾರೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು