11:49 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮೂಡುಬಿದರೆ: ಮಹಾಕವಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ ದ ‘ಮಂದಾರ ಮಂಥನ’ ಸಂಪನ್ನ

24/07/2022, 08:12

ಮೂಡುಬಿದರೆ(reporterkarnataka.com): ಮೂಡುಬಿದರೆಯ ಆಳ್ವಾಸ್ ತುಳು ಅಧ್ಯಯನ ಕೇಂದ್ರ ಮತ್ತು ಮಂದಾರ ಪ್ರತಿಷ್ಠಾನದ ಸಹಯೋಗದಲ್ಲಿ ತುಳು ವಾಲ್ಮೀಕಿ, ಮಹಾಕವಿ, ಮಂದಾರ ಕೇಶವ ಭಟ್ಟರ “ಮಂದಾರ ರಾಮಾಯಣ”ದ ವಾಚನ ಮತ್ತು ವ್ಯಾಖ್ಯಾನ -“ಮಂದಾರ ಮಂಥನ” ಕಾರ್ಯಕ್ರಮ ಶನಿವಾರ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ ಸಂಪನ್ನಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು  ಮಂದಾರ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಪ್ರಭಾಕರ ಜೋಶಿ ನೆರವೇರಿಸಿದರು. ಬಳಿಕ ಮಾತನಾಡಿದ ಡಾ. ಜೋಶಿ ಅವರು, ಹಲವರು ಹಲವು ರೀತಿಯಲ್ಲಿ ರಾಮಾಯಣವನ್ನು ಬರೆದರು, ವ್ಯಾಖ್ಯಾನಿಸಿದರು. ಮಂದಾರ ರಾಮಾಯಣದಲ್ಲಿ ಕವಿ ಮಂದಾರರು ಸಾಮಾನ್ಯರಲ್ಲಿ ಸಾಮಾನ್ಯರಿಗೂ ಅರ್ಥವಾಗುವಂತೆ ಬಹಳ ಸುಲಭ ಆಡು ಭಾಷೆಗಳನ್ನೇ ಬಳಸಿ ರಾಮಾಯಣವನ್ನು ಬರೆದಿರುವುದು ವಿಶೇಷವೇ ಸರಿ ಎಂದರು.

ಮಂದಾರರ ಮತ್ತು ತನ್ನ ಸುಮಾರು 30 ವರ್ಷಗಳ ಸಂಬಂಧವನ್ನು ವಿದ್ಯಾರ್ಥಿಗಳಿಗೆ ಅವರು ವಿವರಿಸಿದರು. ಮುಖ್ಯ ಅತಿಥಿಗಳಾಗಿ  ಡಾ. ರಾಜೇಶ್ ಆಳ್ವ (ಅಧ್ಯಕ್ಷರು, ತುಳು ವರ್ಲ್ಡ್ ), ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕುರಿಯನ್, ಮಂದಾರ ಕೇಶವ ಭಟ್ಟರ ಮಗಳು ಶಾರದಾಮಣಿ, ಪತ್ರಕರ್ತರಾದ ಡಾ. ರಾಜೇಶ್ ಭಟ್ ಮಂದಾರ ಆಗಮಿಸಿದ್ದರು.


ಮಂದಾರ ರಾಮಾಯಣದ ವಾಚನ- ವ್ಯಾಖ್ಯಾನ ಕಾರ್ಯಕ್ರಮ ಡಾ. ದಿನಕರ ಪಚ್ಚನಾಡಿ, ಶಿವಪ್ರಸಾದ್ ಎಡಪದವು, ಶಾಲಿನಿ ಹೆಬ್ಬಾರ್ ಕಂಠದಿಂದ ಉತ್ತಮವಾಗಿ ಮೂಡಿ ಬಂತು.   ಆಳ್ವಾಸ್ ಶಿಕ್ಷಣ ಸಂಸ್ಥೆಯ ತುಳು ವಿಭಾಗದ ಮುಖ್ಯಸ್ಥ ಡಾ. ಯೋಗೀಶ್ ಕೈರೂಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ  ಮಾಡಿದರು. ಮಂದಾರ ಪ್ರತಿಷ್ಠಾನದ ಕಾರ್ಯದರ್ಶಿ ಪ್ರಮೋದ್ ಸಪ್ರೆ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು