2:04 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ ನಾಯಕರ ಸೂತ್ರ

18/03/2024, 21:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಮಂಡಲದ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಿದ್ದ ಆದೇಶವನ್ನು ವಾಪಸ್ ಪಡೆಯಲಾಗಿದೆ.
ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಅವರು ಇಂದು ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.
ಬಿಜೆಪಿ ಮೂಡಿಗೆರೆ ಮಂಡಲದ ಬಣಕಲ್ ಹೋಬಳಿ ಅಧ್ಯಕ್ಷ ಪಿ.ಜಿ. ಅನುಕುಮಾರ್ (ಪಟ್ಟದೂರು ಪುಟ್ಟಣ್ಣ) ಮತ್ತು ಗೋಣಿಬೀಡು ಹೋಬಳಿ ಅಧ್ಯಕ್ಷ ಭರತ್ ಕನ್ನೇಹಳ್ಳಿ ಇವರನ್ನು ಇತ್ತೀಚೆಗೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇದೀಗ ಈ ಅಮಾನತು ಆದೇಶವನ್ನು ಪಕ್ಷದ ಜಿಲ್ಲಾಧ್ಯಕ್ಷರು ವಾಪಾಸ್ಸು ಪಡೆದಿದ್ದಾರೆ.
ಮೂಡಿಗೆರೆ ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಉಂಟಾದ ಗೊಂದಲ, ಪಕ್ಷದ ಅಧ್ಯಕ್ಷರನ್ನಾಗಿ ಟಿ.ಎಂ. ಗಜೇಂದ್ರ ಅವರನ್ನು ನೇಮಕ ಮಾಡಿದ ಸಂದರ್ಭದಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದ ಅನುಕುಮಾರ್ ಮತ್ತು ಭರತ್ ಅವರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದರು. ತಾಪಂ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರ ಮೇಲೆ ಅನುಕುಮಾರ್ ಮತ್ತು ಭರತ್ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಘಟನೆಯ ಹಿನ್ನಲೆಯಲ್ಲಿ ಜಿಲ್ಲಾಧ್ಯಕ್ಷರು ಅಶಿಸ್ತಿನ ಕಾರಣ ನೀಡಿ ಅನುಕುಮಾರ್ ಮತ್ತು ಭರತ್ ಅವರನ್ನು ಪಕ್ಷದಿಂದ ಅಮಾನತು ಮಾಡಿದ್ದರು. ಯಾವುದೇ ನೋಟೀಸ್ ನೀಡದೇ ಏಕಾಏಕಿ ಅಮಾನತು ಮಾಡಲಾಗಿದೆ ಎಂದು ಮುಖಂಡರು ಜಿಲ್ಲಾಧ್ಯಕ್ಷರ ವಿರುದ್ಧ ಹರಿಹಾಯ್ದಿದ್ದರು. ಮಾತ್ರವಲ್ಲ ಇವರ ಬೆಂಬಲಿಗರು ಸಹ ತಮ್ಮ ಅಸಮಧಾನ ವ್ಯಕ್ತಪಡಿಸಿದ್ದರು.
ಮಾರ್ಚ್ 15ರಂದು ಏರ್ಪಡಿಸಲಾಗಿದ್ದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ದಿನವೇ ಅನುಕುಮಾರ್ ಮತ್ತು ಭರತ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಭಿಮಾನಿ ಕಾರ್ಯಕರ್ತರ ಹೆಸರಿನಲ್ಲಿ ಪರ್ಯಾಯ ಸಮಾವೇಶ ಮಾಡಿದ್ದರು. ಈ ಸಮಾವೇಶಕ್ಕೆ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಗೊಂದಲದಿಂದಾಗಿ ಅಂದು ನಿಗದಿಯಾಗಿದ್ದ ಪದಗ್ರಹಣ ಸಮಾರಂಭವನ್ನು ಮುಂದೂಡಲಾಗಿತ್ತು. ಗೊಂದಲ ನಿವಾರಣೆಗೆ ಮುಖಂಡರು ಆಸಕ್ತಿ ತೋರಿ ಮುಂದಿನ ದಿನಗಳಲ್ಲ ಒಟ್ಟಾಗಿ ಸೇರಿ ಪದಗ್ರಹಣ ಸಮಾರಂಭ ಏರ್ಪಡಿಸುವ ಇಂಗಿತ ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಪಕ್ಷದ ಹಿರಿಯ ಮುಖಂಡರು ಮಧ್ಯಪ್ರವೇಶಿಸಿ ಪರಸ್ಪರ ಮುನಿಸಿಕೊಂಡಿದ್ದ ಎರಡೂ ಗುಂಪಿನ ನಾಯಕರ ನಡುವೆ ರಾಜಿಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. ಅದರ ಪರಿಣಾಮ ಇಂದು ಜಿಲ್ಲಾಧ್ಯಕ್ಷರು ಅಮಾನತು ಆದೇಶವನ್ನು ವಾಪಾಸ್ಸು ಪಡೆದಿದ್ದಾರೆ.
ಇದರೊಂದಿಗೆ ಮೂಡಿಗೆರೆ ಮಂಡಲ ಬಿಜೆಪಿಯಲ್ಲಿ ಉಂಟಾಗಿದ್ದ ಗೊಂದಲ ಒಂದು ಹಂತಕ್ಕೆ ತಣ್ಣಗಾಗುವ ಲಕ್ಷಣಗಳು ಕಂಡುಬರುತ್ತಿವೆ.
ಅಮಾನತು ವಾಪಾಸ್ಸು ಪಡೆದಿರುವ ಆದೇಶ ಇನ್ನೂ ನಮಗೆ ಅಧಿಕೃತವಾಗಿ ತಲುಪಿಲ್ಲ. ಪಕ್ಷದ ಹಿರಿಯ ಮುಖಂಡರಾದ ಎಂ.ಕೆ.ಪ್ರಾಣೇಶ್ ಅವರು, ಸಿ.ಟಿ.ರವಿಯವರು ಕರೆದು ಮಾತನಾಡಿದ್ದಾರೆ. ಅವರ ಮಾರ್ಗದರ್ಶನದಂತೆ ಮತ್ತು ಬೆಂಬಲಿಗರ ಅಭಿಪ್ರಾಯದಂತೆ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಹೋಗಲು ತೀರ್ಮಾನವಾಗಿದೆ. ಈ ಹಿಂದೆ ಮಾಜಿ ಶಾಸಕರ ಜೊತೆ ಜೆ.ಡಿ.ಎಸ್. ಗೆ ಹೋಗಿರುವ ಮುಖಂಡರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಮರಳಿ ಸೇರಿಸಿಕೊಳ್ಳಬೇಕು. ಪದಗ್ರಹಣ ಸಮಾರಂಭ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಎಂ.ಕೆ. ಪ್ರಾಣೇಶ್ ಅವರುಗಳ ಉಪಸ್ಥಿತಿಯಲ್ಲಿ ನಡೆಯಬೇಕು ಎಂದು ಬೇಡಿಕೆ ಇಟ್ಟಿದ್ದೇವೆ. ಬೆಂಬಲಿಗರ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನಗಳನ್ನು ಕೈಗೊಳ್ಳುತ್ತೇವೆ ಎಂದು
ಪಿ.ಜಿ. ಅನುಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು