3:56 AM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು