3:39 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಗ್ಗಸಗೋಡು ಗ್ರಾಮದಲ್ಲಿ ನಾಯಿ ದಾಳಿಯಿಂದ 5ರ ಹರೆಯದ ಬಾಲಕಿಗೆ ಗಾಯ

29/11/2024, 15:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ.
ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ. ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ. ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ. ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ. ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿಧಿನಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು