8:56 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು