9:50 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಮೂಡಿಗೆರೆಯಿಂದ ತೆರಳಿದ ಬಿಜೆಪಿ ತಂಡದಿಂದ ಅಯೋಧ್ಯೆಯಲ್ಲಿ ಶ್ರೀ ರಾಮನ ದರ್ಶನ

10/02/2024, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಬುಧವಾರ ಬಿಜೆಪಿ ಆಯೋಜಿಸಿದ್ದ ಅಯೋಧ್ಯ ಶ್ರೀರಾಮ ದರ್ಶನ 2024 ಅಂಗವಾಗಿ ಕಳೆದ ಬುಧವಾರ ರಾಜ್ಯದ ಬಿಜೆಪಿ ಮೊದಲ ತಂಡವಾಗಿ ತುಮಕೂರು ಚಿಕ್ಕಮಗಳೂರು, ಹಾಸನ ಮಧುಗಿರಿಯ 1200 ಜನರ ಜನರ ತಂಡ ಹೊರಟಿದ್ದು ತುಮಕೂರಿನಲ್ಲಿ ಚಾಲನೆ ನೀಡಲಾಗಿದ್ದು ಮೂಡಿಗೆರೆ ಸೇರಿದಂತೆ ಚಿಕ್ಕಮಗಳೂರಿನ ತಂಡವನ್ನು ಕಡೂರಿನಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕರುಗಳಾದ ಬೆಳ್ಳಿ ಪ್ರಕಾಶ್ ಡಿ ಎಸ್, ಸುರೇಶ್ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರಜಿ ಪುಣ್ಯಪಾಲ್ ಹಾಗೂ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಡೂರು ರೈಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟರು ಯಾತ್ರೆಯನ್ನು ಅತ್ಯಂತ ಭದ್ರತೆಯಿಂದ ತಲುಪಿಸುವ ವ್ಯವಸ್ಥೆ ಮಾಡಿದ್ದು ರಾಮಭಕ್ತರು ಸೇರಿದಂತೆ ಸಾರ್ವಜನಿಕರು ಹೂಮಾಲೆ ಹಾರಗಳು ಹಾಗೂ ಕಾಣಿಕೆ ನೀಡುವ ಮೂಲಕ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಿದ್ದಾರೆ.
ಇಂದು ಅಯೋಧ್ಯ ದಶನವನ್ನು ನಡೆಸಲಾಯಿತು. ನಯನ, ಪರೀಕ್ಷಿತ್, ಪದ್ಮಣ್ಣ, ಸಂಜಯ್ ಭಾರತಿ, ರವೀಂದ್ರ ನಂದನ್ ಕುಂದೂರು, ಪ್ರಸನ್ನ, ರವಿ, ಪ್ರದೀಪ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುಧೀರ್ ಕಮಲಾಕ್ಷ್ಮ ಸೇರಿದಂತೆ ಹಲವರು ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು