1:10 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮೂಡಿಗೆರೆ: ಹಾಡಹಗಲೇ ಗದ್ದೆ, ತೋಟದಲ್ಲಿ ಸುತ್ತಾಡುತ್ತಿರುವ ಕಾಡಾನೆ; ಎಚ್ಚರಿಕೆ ವಹಿಸುವಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಸೂಚನೆ

04/08/2023, 20:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಗ್ರಾಮದ ಗದ್ದೆ, ತೋಟಗಳಲ್ಲಿ ಅತ್ತಿಂದಿತ್ತ ಸುತ್ತಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕಸೃಷ್ಟಿಸಿದೆ.
ಬಡವನದಿಣ್ಣೆಯಲ್ಲಿ ಹಾಡಹಗಲೇ ಕಾಡಾನೆಗಳ ಓಡಾಟ ನಡೆಸುತ್ತಿವೆ.ಗ್ರಾಮದ ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಸುತ್ತುತ್ತಿವೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಬಡವನದಿಣ್ಣೆ ಮೂಡಿಗೆರೆ ಕೊಟ್ಟಿಗೆಹಾರ ಮುಖ್ಯ ರಸ್ತೆ ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇದೆ. ಹಾಗಾಗಿ ಆನೆಗಳು ಮುಖ್ಯರಸ್ತೆಗೆ ಬರುವ ಆತಂಕ ಎದುರಾಗಿದೆ.
ನಿನ್ನೆ ರಾತ್ರಿಯಿಂದ ಕಾಡಾನೆಗಳು ಗ್ರಾಮದಲ್ಲಿ ಬೀಡುಬಿಟ್ಟಿವೆ. ರೈತರ ಕಾಫಿತೋಟಗಳನ್ನು ಪುಡಿಮಾಡುತ್ತಿವೆ. ಇದರಿಂದ ರೈತರು ತೀವ್ರ ನಷ್ಟಕ್ಕೆ ಒಳಗಾಗುತ್ತಿದ್ದಾರೆ.
ಅರಣ್ಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಕಾಡಾನಗಳನ್ನು ಕಾಡಿಗೆ ಅಟ್ಟಲು ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಆನೆಗಳು ಸ್ಥಳವನ್ನು ಬಿಟ್ಟು ಕದಲುತ್ತಿಲ್ಲ.
ಈ ಭಾಗದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು