7:32 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಕುಡಿತದ ಮತ್ತಿನಲ್ಲಿದ್ದ ಪತಿಯಿಂದ ಪತ್ನಿಯ ಕೊಲೆ; ಬೆಳಗಾದ ಬಳಿಕವೇ ಹತ್ಯೆ ಬೆಳಕಿಗೆ, ಆರೋಪಿಯ ಬಂಧನ

14/10/2023, 23:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಡಿದ ಮತ್ತಿನಲ್ಲಿದ್ದ ಪತಿ ತನ್ನ ಪತ್ನಿಯನ್ನು ಕೊಡಲಿಯಿಂದ ಹೊಡೆದು, ಮನೆಯಿಂದ ಹೊರಗೆ ತಳ್ಳಿ ಕೊಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪದ್ಮಾಕ್ಷಿ (40) ಎಂದು ಗುರುತಿಸಲಾಗಿದೆ.
ಕುಡಿಯದ ವಿಚಾರಕ್ಕೆ ಗಂಡ-ಹೆಂಡ್ತಿ ಮಧ್ಯೆ ಯಾವಾಗಲೂ ಜಗಳವಾಗುತ್ತಿತ್ತು. ಈ ಬಾರಿ ಜಗಳ ವಿಕೋಪಕ್ಕೆ ಹೋಗಿ ಪತಿ
ಕೊಡಲಿಯಿಂದ ಹೊಡೆದು ಮನೆಯಿಂದ ಹೊರ ತಳ್ಳಿ ಪತ್ನಿ ಯ ಹತ್ಯೆಗೈದಿದ್ದಾನೆ.

ಪತ್ನಿಯನ್ನು ಹೊಡೆದು ಹೊರಹಾಕಿ ಪತಿ ಮನೆಯೊಳಗೆ ಹಾಯಾಗಿ
ಮಲಗಿದ್ದ. ಬೆಳಗಾದ ನಂತರ ಪತ್ನಿ ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ.ಮೃತಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಕೊಲೆ ನಡೆಯುವಾಗ ಮನೆಯಲ್ಲಿ ಯಾರೂ ಇರಲಿಲ್ಲ. ಗೋಣಿಬೀಡು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಪತಿ ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು