5:40 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮೂಡಿಗೆರೆ: ಮಳೆಗೆ ಮೊದಲ ಬಲಿ: ಮರ ಬಿದ್ದು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಹೋಂಸ್ಟೇ ಮಾಲೀಕ ದಾರುಣ ಸಾವು

21/05/2023, 20:59

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

2023ರ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಬಲಿಯಾಗಿದೆ. ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಘಟನೆ ನಡೆದಿದೆ.
ಮೃತರನ್ನು‌ ವೇಣುಗೋಪಾಲ್ (45) ಎಂದು ಗುರುತಿಸಲಾಗಿದೆ.
ಚಿಕ್ಕಹಳ್ಳ ಗ್ರಾಮದಲ್ಲಿ ವೇಣುಗೋಪಾಲ್ ಅವರು
ಹೋಂ ಸ್ಟೇ ನಡೆಸುತ್ತಿದ್ದರು. ಹೋಂ ಸ್ಟೇಯ ತುಸು ದೂರದಲ್ಲಿ ಮರ ಬಿದ್ದು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಒಂದೇ ಒಂದು ನಿಮಿಷ ತಡವಾಗಿದ್ದರೆ ಮನೆ ಸೇರಿಕೊಳ್ಳುತ್ತಿದ್ದರು.


ಮೂಲತಃ ಉತ್ತರ ಕರ್ನಾಟಕ ವೇಣುಗೋಪಾಲ್ ಮೂಡಿಗೆರೆಯಲ್ಲಿ ಮದುವೆಯಾಗಿ ಇಲ್ಲೇ ವಾಸವಿದ್ದರು. ಹೋಂ ಸ್ಟೇ ಜೊತೆ ಮೂಡಿಗೆರೆಯಲ್ಲಿ ಬಳೆ ಅಂಗಡಿ ಇಟ್ಟುಕೊಂಡಿದ್ದರು.ಒಂದರ ಹಿಂದೆ ಒಂದರಂತೆ ಒಂದೇ ಕಾಲಕ್ಕೆ ಮೂರು ಮರಗಳು ಬಿದ್ದಿವೆ. ಸ್ಕೂಟಿಯಲ್ಲಿದ್ದ ವೇಣುಗೋಪಾಲ್, ಮರ ಬೀಳುತ್ತಿದ್ದಂತೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಆಲ್ದೂರು ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು