1:11 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರ ದಾರುಣ ಸಾವು; ಕಾಫಿನಾಡಿನಲ್ಲಿ ಮುಂದುವರಿದ ಮಳೆ ಅಬ್ಬರ

10/08/2022, 09:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಕೆ ತಲಗೂರು ಎಂಬಲ್ಲಿ ಮನೆ ಮೇಲೆ ಬೃಹತಾಕಾರದ ಮರ ಒಂದು ಬಿದ್ದು ಮನೆಯಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. 

ರಾತ್ರಿ ಸುಮಾರು10.00 ಗಂಟೆಯ ಸಮಯದಲ್ಲಿ ಕೆ. ತಲಗೂರು ಗ್ರಾಮದ ಚಂದ್ರಮ್ಮ ಅವರ ಮನೆಯಲ್ಲಿ ಚಂದ್ರಮ್ಮ ಮತ್ತು ಸರಿತಾ ಹಾಗೂ ಸರಿತಾ  ಅವರ ಮಕ್ಕಳಾದ ಸುನಿಲ್ ಹಾಗೂ ದೀಕ್ಷಿತ್  ಅವರು ಮಲಗಿದ್ದಾಗ ಮನೆಯ ಪಕ್ಕದಲ್ಲಿ ಇದ್ದ ಬೃಹದಾಕಾರದ ಮರ ಚಂದ್ರಮ್ಮ ಅವರ ಮನೆಯ ಮೇಲೆ ಬಿದ್ದು  ಮನೆಯೊಳಗೆ ಮಲಗಿದ್ದ ಸರಿತಾ
ಅವರು ಸ್ಥಳದಲ್ಲಿ ಮೃತಪಟ್ಟಿದ್ದು, ಚಂದ್ರಮ್ಮ ರವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮದ್ಯೆ ಮೃತಪಟ್ಟಿದ್ದಾರೆ. ಮೃತರಾದ ಸರಿತಾ ಮತ್ತು ಚಂದ್ರಮ್ಮ ರವರು ಸಂಬಂಧಿಕರಾಗಿದ್ದು, ಅಕ್ಕಪಕ್ಕದ ಮನೆಯವರಾಗಿದ್ದಾರೆ.


ಕಳೆದ ಒಂದು ವಾರದಿಂದ ಮೂಡಿಗೆರೆ ಮತ್ತು ಕಳಸ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಮತ್ತು ಗಾಳಿ ಬೀಸುತ್ತಿದ್ದು ಗಾಳಿ ಮಳೆಗೆ ಮರ ಬಿದ್ದು ಈ ಅನಾಹುತ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು