2:28 AM Saturday1 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮತದಾನ ಕುರಿತು ಸಾರ್ವಜನಿಕರಲ್ಲಿ ಜಾಗೃತಿ; ಅಧಿಕಾರಿಗಳಿಗೆ ತರಬೇತಿ

06/03/2023, 23:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸುವ ಸಲುವಾಗಿ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಚಿಕ್ಕಮಗಳೂರು ಮತ್ತು ಚುನಾವಣೆ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು.


ಈ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದ ಉಪ ವಿಭಾಗ ವಿಭಾಗಾಧಿಕಾರಿ, ರಾಜೇಶ್ ಎಚ್ ಡಿ, ಅವರು ಅಧಿಕಾರಿಗಳಿಗೆ ಇವಿಎಂ ಹೇಗೆ ಕಾರ್ಯನಿರ್ವಹಿಸುತ್ತದೆ ಹಾಗೂ ಮತದಾನದ ಸಂದರ್ಭದಲ್ಲಿ ಎದುರಾಗುವ ತೊಡಕುಗಳನ್ನು ಹೇಗೆ ಬಗೆಹರಿಸಬೇಕು ಎಂಬುದನ್ನು ಸವಿವರವಾಗಿ ವಿವರಿಸಿದರು. ನಂತರ ಮಾಸ್ಟರ್ ಟ್ರೈನರ್ ಗಳಾದ
ಶ್ರೀನಿವಾಸ್ ಹಾಗೂ ತಿಮ್ಮಪ್ಪನವರು ಇವಿಎಂನ ಪ್ರಾತ್ಯಕ್ಷಿಕೆಯನ್ನು ಅಧಿಕಾರಿಗಳಿಗೆ ನೀಡಿದರು. ಜನರಲ್ಲಿ ಇವಿಎಂ ಮೂಲಕ ಹೇಗೆ ಮತದಾನದ ಮಹತ್ವವನ್ನು ನೀಡಬೇಕೆಂಬುದನ್ನಾಗಿ ಇವಿಎಂಗಳನ್ನು ಬಳಸಿಕೊಂಡು ತರಬೇತಿ ನೀಡಲಾಯಿತು. ಈ ಸಭೆಯಲ್ಲಿ ತಹಸಿಲ್ದಾರ್ ಮತ್ತು ಸಹಾಯಕ ಚುನಾವಣೆ ಅಧಿಕಾರಿ ಮೂಡಿಗೆರೆ, ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರು ತಾಲೂಕ್ ಪಂಚಾಯಿತಿ , ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸೆಕ್ಟರ್ ಅಧಿಕಾರಿಗಳು ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈವಿಎಂ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು