3:44 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮೂಡಿಗೆರೆ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿದ ಇಬ್ಬರು ಕೂಲಿ ಕಾರ್ಮಿಕರು ಸಾವು

27/02/2023, 22:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮುಳ್ಳು ಹಂದಿ ಶಿಕಾರಿ ಮಾಡಲು ಸುರಂಗದ ಒಳಗೆ ಪ್ರವೇಶಿಸಿದ ಇಬ್ಬರು ಕೂಲಿ ಕಾರ್ಮಿಕರು ಉಸಿರಾಟ ಆಗದೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ.

ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28) ಹಾಗೂ ಶರತ್ (26) ಅವರು ಉಸಿರುಗಟ್ಟಿ ಸಾವನ್ನಪ್ಪಿದ ಕೂಲಿಕಾರ್ಮಿಕರು.
ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ ತೆರಳಿದ್ದರು ಎನ್ನಲಾಗಿದೆ.
ಸುರಂಗದ ದರಕ್ಕೆ ಹೊಗೆ ಹಾಕಿ ಇಬ್ಬರು ದರದ ಒಳಗೆ ನುಗ್ಗಿದ ಪರಿಣಾಮ ಹೊಗೆಯಿಂದಾ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುವ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಾಳೂರು ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್, ಪೊಲೀಸರು ಮತ್ತು ಸ್ಥಳೀಯರು ಗುಹೆಯೊಳಗೆ ನುಗ್ಗಿ ಶವಗಳನ್ನು ಹೊರತೆಗೆದರು.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು