6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿದ ಇಬ್ಬರು ಕೂಲಿ ಕಾರ್ಮಿಕರು ಸಾವು

27/02/2023, 22:48

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮುಳ್ಳು ಹಂದಿ ಶಿಕಾರಿ ಮಾಡಲು ಸುರಂಗದ ಒಳಗೆ ಪ್ರವೇಶಿಸಿದ ಇಬ್ಬರು ಕೂಲಿ ಕಾರ್ಮಿಕರು ಉಸಿರಾಟ ಆಗದೆ ಸಾವನ್ನಪ್ಪಿದ ದಾರುಣ ಘಟನೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಎಂಬಲ್ಲಿ ಘಟನೆ ನಡೆದಿದೆ.

ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರಾದ ತಮಿಳುನಾಡು ಮೂಲದ ವಿಜಯ್ (28) ಹಾಗೂ ಶರತ್ (26) ಅವರು ಉಸಿರುಗಟ್ಟಿ ಸಾವನ್ನಪ್ಪಿದ ಕೂಲಿಕಾರ್ಮಿಕರು.
ಕಾಳು ಮೆಣಸು ಕುಯ್ಯಲು ಬಂದಿದ್ದ ತಮಿಳುನಾಡಿನ ಕಾರ್ಮಿಕರು ಮುಳ್ಳು ಹಂದಿ ಶಿಕಾರಿ ಮಾಡಲು ಗುಡ್ಡಕ್ಕೆ ತೆರಳಿದ್ದರು ಎನ್ನಲಾಗಿದೆ.
ಸುರಂಗದ ದರಕ್ಕೆ ಹೊಗೆ ಹಾಕಿ ಇಬ್ಬರು ದರದ ಒಳಗೆ ನುಗ್ಗಿದ ಪರಿಣಾಮ ಹೊಗೆಯಿಂದಾ ಉಸಿರಾಡಲು ಸಾಧ್ಯವಾಗದೆ ಗುಹೆಯೊಳಗೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಹೇಳುವ ಮಾಹಿತಿ ನೀಡಿದ್ದಾರೆ.


ಸ್ಥಳಕ್ಕೆ ಬಾಳೂರು ಸಬ್ ಇನ್ಸ್ ಪೆಕ್ಟರ್ ಪವನ್ ಕುಮಾರ್, ಪೊಲೀಸರು ಮತ್ತು ಸ್ಥಳೀಯರು ಗುಹೆಯೊಳಗೆ ನುಗ್ಗಿ ಶವಗಳನ್ನು ಹೊರತೆಗೆದರು.
ಮೂಡಿಗೆರೆ ತಾಲ್ಲೂಕಿನ ಬಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು