4:41 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮೂಡಿಗೆರೆ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೇಮಾವತಿ ನದಿಯಲ್ಲಿ ಪತ್ತೆ

18/02/2024, 12:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್ (36) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದು,‌ ಅವರ ಶವ ಹೇಮಾವತಿ ನದಿಯಲ್ಲಿ ಪತ್ತೆಯಾಗಿದೆ.
ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ ಮೇಲ್ಬಾಗದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ನಂತರ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ಶಂಕರ್ ಅವರ ಶವವಾಗಿತ್ತು.
ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಮತ್ತು ಸಮಾಜ ಸೇವಕ ಫಿಶ್ ಮೋಣು ತಂಡದವರ ಸಹಾಯದಿಂದ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.
ಶವವನ್ನು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಮೃತ ಶಂಕರ್ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಈ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು