10:21 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಸರಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

10/12/2023, 15:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ನಡೆದಿದೆ. ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ ಬಸ್ಸಿನ ಚಾಲಕರ ಬೇವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನ ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಅಪಘಾತದಿಂದ ಎರಡು ಬಸ್ಸಿನ ಚಾಲಕರಿಗೆ ತುಸು ಹೆಚ್ಚಾಗಿ ಗಾಯವಾಗಿದೆ. ಏಕೆಂದರೆ ಬಸ್ಸುಗಳು, ಮುಖಾಮುಖಿ ಡಿಕ್ಕಿ ಆದ ಸಂದರ್ಭದಲ್ಲಿ ಕೂಡ ಎರಡು ಬಸ್ಸಿನ ಡ್ರೈವರ್ ಸೀಟಿನ ಭಾಗ ಸಂಪೂರ್ಣ ನಜ್ಜುಗೊಜ್ಜಾಗಿದೆ. ಹಾಗಾಗಿ, ಎರಡು ಬಸ್ಸಿನ ಚಾಲಕರಿಗೂ ತುಸು ಹೆಚ್ಚಾಗಿ ಗಾಯವಾಗಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಆಂಬುಲೆನ್ಸ್ ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲ್ಲೂಕು ಬಹುತೇಕ ಮಲೆನಾಡು ಭಾಗದಿಂದ ಕೂಡಿದೆ. ಇಲ್ಲಿ ಹಾವು ಬಳಕಿನ ಮೈ ಕಟ್ಟಿನ ರಸ್ತೆಯೇ ಹೆಚ್ಚು. ಹಾಗಾಗಿ, ವಾಹನಗಳ ಚಾಲಕರು ಅತ್ಯಂತ ಜಾಗರೂಕರಾಗಿ ವಾಹನ ಚಲಾಯಿಸಬೇಕು. ಇಲ್ಲವಾದರೆ ಅಪಘಾತ ಕಟ್ಟಿಟ್ಟ ಬುತ್ತಿ. ಹಾವು ಬಳುಕಿನ ಮೈಕಟ್ಟಿನ ರಸ್ತೆ ಆಗಿರುವುದರಿಂದ ಮೂಡಿಗೆರೆ ತಾಲೂಕಿನ ಅಲ್ಲಲ್ಲೇ ಸಾಕಷ್ಟು ಅಪಘಾತಗಳು ಕೂಡ ಸಂಭವಿಸುತ್ತಿವೆ. ಆದರೆ, ತರಬೇತಿ ಪಡೆದ ಸರ್ಕಾರಿ ಬಸ್ಸಿನ ಚಾಲಕರು ವೇಗವಾಗಿ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿರುವುದಕ್ಕೆ ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು