11:18 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು

22/12/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ.
ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ  ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು.
ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತ ಕೀರ್ತಿ(21) ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದವರು. ಚೀಕನಹಳ್ಳಿ ಗ್ರಾಮದ ದಿವಂಗತ ಹಾಲಪ್ಪ ಎಂಬುವವರ ಪುತ್ರ. ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟ್ರಾಕ್ಟರ್ ಚಿಕ್ಕಮಗಳೂರು ತಾಲ್ಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದುಬಂದಿದೆ.
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ಕೀರ್ತಿ ತಂದೆ ತಾಯಿ ಇಬ್ಬರು ಮರಣ ಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು