8:32 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮೂಡಿಗೆರೆ ಸಮೀಪ ಟ್ರಾಕ್ಟರ್ – ಕಾರು ಅಪಘಾತ: ಗಾಯಾಳು ಯುವಕ ಸಾವು

22/12/2023, 14:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterKarnataka@gmail.com

ಟ್ರಾಕ್ಟರ್ ಮತ್ತು ಕಾರು ನಡುವಿನ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಕೊನೆಯುಸಿರೆಳೆದಿದ್ದಾರೆ.
ಮೂಡಿಗೆರೆ ಸಮೀಪದ ಮುತ್ತಿಗೆಪುರ ಎಂಬಲ್ಲಿ ಗುರುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿತ್ತು. ಮಾರುತಿ 800 ಕಾರು ಮತ್ತು ಟ್ರಾಕ್ಟರ್ ನಡುವೆ ಅಪಘಾತ ಸಂಭವಿಸಿ  ಕಾರು ಚಾಲನೆ ಮಾಡುತ್ತಿದ್ದ ಕೀರ್ತಿ ಎಂಬ ಯುವಕನ ಸ್ಥಿತಿ ಗಂಭೀರವಾಗಿತ್ತು.
ಗಾಯಗೊಂಡ ಚಾಲಕನಿಗೆ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ನಂತರ ಮೃತದೇಹವನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತಂದು ಶುಕ್ರವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತ ಕೀರ್ತಿ(21) ಬೇಲೂರು ತಾಲ್ಲೂಕು ಚೀಕನಹಳ್ಳಿ ಗ್ರಾಮದವರು. ಚೀಕನಹಳ್ಳಿ ಗ್ರಾಮದ ದಿವಂಗತ ಹಾಲಪ್ಪ ಎಂಬುವವರ ಪುತ್ರ. ಮೂಡಿಗೆರೆ ಸಮೀಪದ ಚಿಕ್ಕಳ್ಳ ಎಂಬಲ್ಲಿ ಕಾಫಿ ಎಸ್ಟೇಟ್ ಒಂದರಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಚೀಕನಹಳ್ಳಿ ತನ್ನ ಮನೆಯಿಂದ ಚಿಕ್ಕಳ್ಳದ ತೋಟಕ್ಕೆ ಮಾರುತಿ 800 ಕಾರಿನಲ್ಲಿ ತೆರಳುತ್ತಿದ್ದಾಗ ಮೂಡಿಗೆರೆ ಸಮೀಪದ ಮುತ್ತಿಗೆಪುರದಲ್ಲಿ ಎದುರಿನಿಂದ ಬಂದ ಟ್ರಾಕ್ಟರ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಟ್ರಾಕ್ಟರ್ ಚಿಕ್ಕಮಗಳೂರು ತಾಲ್ಲೂಕು ಹಾಂದಿ ಮೂಲದ ವ್ಯಕ್ತಿಗೆ ಸೇರಿದೆಂದು ತಿಳಿದುಬಂದಿದೆ.
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೃತ ಕೀರ್ತಿ ತಂದೆ ತಾಯಿ ಇಬ್ಬರು ಮರಣ ಹೊಂದಿದ್ದು, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು