4:05 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ,‌ ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ

04/04/2023, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿ.ಎಲ್. ಸಂತೋಷ್, ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಪತ್ರ ಬರೆದಿದ್ದಾರೆ. ಇದರೊಂದಿಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ, ಅಸಮಾಧಾನ ಮುಂದುವರಿದಿದೆ.
10 ಪಾಯಿಂಟ್ ಗಳ ಮಾಹಿತಿಯುಳ್ಳ ಪತ್ರವನ್ನ ಕಾರ್ಯಕರ್ತರು ಮೇಲ್ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯಿಂದಲೂ ಪತ್ರಬರೆಯಲಾಗಿದೆ. ಪ್ರಧಾನಿ ಮೋದಿ ಅವರ ಕಚೇರಿಗೂ ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಸಂತೋಷ್, ಶೋಭಾ ಅವರಿಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಪಕ್ಷ ವಿರೋಧಿ, ಕಾರ್ಯಕರ್ತರ ಕಡೆಗಣನೆ, ವಿಧಾನಸೌಧದ ಮುಂದೆ ಪಕ್ಷ ಮರ್ಯಾದೆ ಕಳೆದದ್ದು
ನೋವು ಹೇಳಿಕೊಂಡವರ ವಿರುದ್ಧ ತಾನೇ ಬಟ್ಟೆ ಹರಿದುಕೊಂಡು ಶಾಸಕರು ಎಂಬ ಆರೋಪ ಕೂಡ ಕೇಳಿ ಬಂದಿದೆ. ಕುಮಾರಸ್ವಾಮಿ ಅವರು ಆಪ್ತರಿಗೆ ಮಾತ್ರ ಹೆಚ್ಚೆಚ್ಚು ಅನುದಾನ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು