1:05 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ,‌ ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ

04/04/2023, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿ.ಎಲ್. ಸಂತೋಷ್, ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಪತ್ರ ಬರೆದಿದ್ದಾರೆ. ಇದರೊಂದಿಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ, ಅಸಮಾಧಾನ ಮುಂದುವರಿದಿದೆ.
10 ಪಾಯಿಂಟ್ ಗಳ ಮಾಹಿತಿಯುಳ್ಳ ಪತ್ರವನ್ನ ಕಾರ್ಯಕರ್ತರು ಮೇಲ್ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯಿಂದಲೂ ಪತ್ರಬರೆಯಲಾಗಿದೆ. ಪ್ರಧಾನಿ ಮೋದಿ ಅವರ ಕಚೇರಿಗೂ ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಸಂತೋಷ್, ಶೋಭಾ ಅವರಿಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಪಕ್ಷ ವಿರೋಧಿ, ಕಾರ್ಯಕರ್ತರ ಕಡೆಗಣನೆ, ವಿಧಾನಸೌಧದ ಮುಂದೆ ಪಕ್ಷ ಮರ್ಯಾದೆ ಕಳೆದದ್ದು
ನೋವು ಹೇಳಿಕೊಂಡವರ ವಿರುದ್ಧ ತಾನೇ ಬಟ್ಟೆ ಹರಿದುಕೊಂಡು ಶಾಸಕರು ಎಂಬ ಆರೋಪ ಕೂಡ ಕೇಳಿ ಬಂದಿದೆ. ಕುಮಾರಸ್ವಾಮಿ ಅವರು ಆಪ್ತರಿಗೆ ಮಾತ್ರ ಹೆಚ್ಚೆಚ್ಚು ಅನುದಾನ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು