6:27 PM Monday14 - July 2025
ಬ್ರೇಕಿಂಗ್ ನ್ಯೂಸ್
ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ

13/01/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂಭವಾಗಿದೆ.

ಒಂದೆಡೆ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ಮೇಲಿಂದ ಮೇಲೆ ನಡೆಯುತ್ತಿದೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಸಭೆ ಆಗಾಗ ನಡೆಯುತ್ತಿದೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ಕೈ ಮುಖಂಡರು ನಡೆಸಿದ್ದಾರೆ.


ನಯನ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಯನ ಮೋಟಮ್ಮ ವಿರುದ್ಧ ಬಂಡಾಯದ ಧ್ವಜ ಹಾರಲಾರಂಭಿಸಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡಿದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ಸ್ಥಳೀಯ ಕೆಲವು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ ಸಭೆ ಕೈ ಮುಖಂಡರು ನಡೆಸಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತೆ ಎಂದು ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ದ ಕಾರ್ಯಕರ್ತರುಕಿಡಿ ಕಾರಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಮೋಟಮ್ಮ ವಿರುದ್ಧ ಕಿಡಿ ಕಾರಿದ್ದಾರೆ.
ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಸಭೆ ಸೇರಿದ ಮುಖಂಡರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು