12:18 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ

13/01/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂಭವಾಗಿದೆ.

ಒಂದೆಡೆ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ಮೇಲಿಂದ ಮೇಲೆ ನಡೆಯುತ್ತಿದೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಸಭೆ ಆಗಾಗ ನಡೆಯುತ್ತಿದೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ಕೈ ಮುಖಂಡರು ನಡೆಸಿದ್ದಾರೆ.


ನಯನ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಯನ ಮೋಟಮ್ಮ ವಿರುದ್ಧ ಬಂಡಾಯದ ಧ್ವಜ ಹಾರಲಾರಂಭಿಸಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡಿದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ಸ್ಥಳೀಯ ಕೆಲವು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ ಸಭೆ ಕೈ ಮುಖಂಡರು ನಡೆಸಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತೆ ಎಂದು ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ದ ಕಾರ್ಯಕರ್ತರುಕಿಡಿ ಕಾರಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಮೋಟಮ್ಮ ವಿರುದ್ಧ ಕಿಡಿ ಕಾರಿದ್ದಾರೆ.
ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಸಭೆ ಸೇರಿದ ಮುಖಂಡರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು