6:38 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಮೂಡಿಗೆರೆ: ವಿಜಯ ಸಂಕಲ್ಪ ಯಾತ್ರೆಗೆ ಮುನ್ನವೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ; ಕುಮಾರಸ್ವಾಮಿ ಕೈತಪ್ಪಲಿದೆಯೇ ಟಿಕೆಟ್ ?

16/03/2023, 14:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಮೂಡಿಗೆರೆ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ
ವಿರುದ್ಧ ಬಿಜೆಪಿಯಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಶಾಸಕರ ವಿರುದ್ಧ ಬಿಜೆಪಿ ಕಾರ್ಯಕರ್ತರು ಸಭೆ ನಡೆಸಿದ್ದಾರೆ. ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್ ಕೈತಪ್ಪುವ ಎಲ್ಲ ಲಕ್ಷಣಗಳು ಕಂಡು ಬರುತ್ತಿದೆ.
ಹಾಲಿ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರ ವಿರುದ್ಧ ಬಹಿರಂಗ ಸಭೆ ನಡೆಸಿದ್ದಾರೆ. ಗುರುವಾರ ಸಂಜೆ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸ್ಫೋಟಗೊಂಡ ಭಿನ್ನಮತ ಇದರೊಂದಿಗೆ ಮೂಡಿಗೆರೆ ಬಿಜೆಪಿಯಲ್ಲಿ ಬಣ ರಾಜಕೀಯ ಸಕ್ರೀಯಗೊಂಡಿದೆ. ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಟ್ಟು ಬೇರೆಯವರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ವ್ಯಕ್ತಿ ಮುಖ್ಯ ಅಲ್ಲ, ನಮ್ಗೆ ಪಕ್ಷ ಮುಖ್ಯ ಎಂದ ಸಾವಿರಾರು ಕಾರ್ಯಕರ್ತರು ಹೇಳಿದ್ದಾರೆ.
ಒಂದು ಗುಂಪು ಕುಮಾರಸ್ವಾಮಿ ಪರ ಬ್ಯಾಟಿಂಗ್, ಮತ್ತೊಂದು ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿದೆ.
ವಿಜಯ ಸಂಕಲ್ಪಯಾತ್ರೆ ಅಂಗವಾಗಿ ಮಧ್ಯಾಹ್ನ ರೋಡ್ ಶೋ ಮುನ್ನ ಬಂಡಾಯ ಗುಂಪಿನಿಂದ ಪ್ರತ್ಯಕ ಸಭೆ ನಡೆದಿದೆ. ಮೂಡಿಗೆರೆ ಪಟ್ಟಣದ ಪ್ರೀತಮ್ ಸಮುದಾಯ ಭವನದಲ್ಲಿ ಕಾರ್ಯಕರ್ತರ
ಬಹಿರಂಗ ಸಭೆ ನಡೆದಿದೆ.ಯಡಿಯೂರಪ್ಪ ನೇತೃತ್ವದಲ್ಲಿ ವಿಜಯ ಸಂಕಲ್ಪಯಾತ್ರೆ ನಡೆಯಲಿದೆ.
ಯಾತ್ರೆಯಲ್ಲಿ ಬಿಜೆಪಿ ಪಕ್ಷದ ಬಣ ರಾಜಕೀಯ ಬೀದಿಗೆ ಬಿದ್ದಿದೆ.
ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಭಾರೀ ಫೈಟ್ ಏರ್ಪಟ್ಡಿದೆ.
ಮೂಡಿಗೆರೆ ಭಾಗದ ಜನರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಎಂ‌.ಪಿ.ಕುಮಾರಸ್ವಾಮಿ ಬಿಟ್ಟು ಬೇರೆ ಯಾರಿಗಾದರೂ ಟಿಕೆಟ್ ನೀಡಿ ಎಂಬ ಒತ್ತಾಯ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು