9:04 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮೂಡಿಗೆರೆ; 3 ಅಂಗಡಿಗಳ ಕಳ್ಳತನ ಬೆನ್ನಲ್ಲೇ ಹಾಡಹಗಲೇ ಮನೆಗಳ್ಳತನ; ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ

09/08/2023, 20:16

ಸಂತೋಷ್ ಅತ್ತಿಗೆರೆ‌ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಕಳ್ಳತನ ನಡೆದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ.
ಮೂರು ದಿನದ ಹಿಂದಷ್ಟೆ ಜಿಲ್ಲೆ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173ರ ಬಣಕಲ್ ಮುಖ್ಯ ರಸ್ತೆಯಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಬೀಗ ಒಡೆದು ಲಕ್ಷಾಂತರ ರೂಪಾಯಿ ಹಣ ಹಾಗೂ ವಸ್ತುಗಳನ್ನ ಕಳ್ಳತನ ಮಾಡಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ವೇದಾವತಿ ಎಂಬುವರ ಮನೆಯ ಹೆಂಚುಗಳನ್ನ ತೆಗೆದು ಕಳ್ಳತನ ಮಾಡಿದ್ದಾರೆ. 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ ಹಾಗೂ 25 ಸಾವಿರ ಹಣವನ್ನ ದೋಚಿದ್ದಾರೆ. ಮನೆಯೊಡತೆ ವೇದಾವತಿ ಇಂದು ಬೆಳಗ್ಗೆ ತಮ್ಮ ಕಾಫಿತೋಟಕ್ಕೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೆ ಮನೆಗೆ ಬರುವಷ್ಟರಲ್ಲಿ ಮನೆ ಹೆಂಚು ತೆಗೆದು ಕಳ್ಳತನ ಮಾಡಿದ್ದಾರೆ. ವಿಷಯ ತಿಳಿದು ಮೂಡಿಗೆರೆ ಸರ್ಕಲ್ ಇನ್ಸ್‍ಪೆಕ್ಟರ್, ಗೋಣಿಬೀಡು ಪಿ.ಎಸ್.ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಣಿಬೀಡು ಠಾಣೆಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಆದರೆ, ಮೂಡಿಗೆರೆ ತಾಲೂಕಿನ ಅಕ್ಕಪಕ್ಕದ ಊರುಗಳಲ್ಲಿ ಹೀಗೆ ಮೇಲಿಂದ ಮೇಲೆ ಕಳ್ಳತನ ನಡೆಯುತ್ತಿದ್ದು ಹೊರಗಡೆಯವರು ಕಳ್ಳತನ ಮಾಡುತ್ತಿದ್ದಾರೋ ಅಥವ ಊರ ಒಳಗಿನವರೇ ಕಳ್ಳತನ ಮಾಡುತ್ತಿದ್ದಾರೋ ಅರ್ಥವಾಗದಂತಾಗಿದೆ. ಆದರೆ, ಮೂಡಿಗೆರೆ ಸುತ್ತಮುತ್ತಲಿನ ಜನ ಮಾತ್ರ ಆತಂಕದಿಂದ ಬದುಕುತ್ತಿದ್ದಾರೆ. ಮೂರು ದಿನಗಳ ಹಿಂದಷ್ಟೆ ಬಣಕಲ್ ಗ್ರಾಮದ ಮಹೇಶ್ ಸಂಭ್ರಮ್ ಎಂಬುವರ ಬಿಲ್ಡಿಂಗ್‍ನಲ್ಲಿನ ಮೊಬೈಲ್ ಅಂಗಡಿ, ಬಟ್ಟೆ ಅಂಗಡಿ ಹಾಗೂ ದಿನಸಿ ಅಂಗಡಿಯಲ್ಲಿ ಕಳ್ಳತನ ನಡೆದಿತ್ತು. ಅಂಗಡಿಗಳ ಹಿಂದಿನ ಶೀಟ್ ಒಡೆದು, ಶೆಟ್ಟರ್ ಮುರಿದು ಸರಣಿ ಕಳ್ಳತನ ಮಾಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದರು. ಶ್ವಾನದಳವನ್ನ ತಂದು ಕಳ್ಳರ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದರು. ಇದೀಗ, ಮತ್ತೆ ಹಾಡಹಗಲೇ ಕಳ್ಳತನ ನಡೆದಿದ್ದು ಜನ ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು