7:53 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮುಗಿದ 6 ತಿಂಗಳ ಗಡು: ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರಕ್ಕೆ ಹಕ್ಕೊತ್ತಾಯ

15/09/2021, 17:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಭರವಸೆಯ ನೀಡಿರುವ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.


ಅಥಣಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ಅಥಣಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ ಮುಖಂಡರು ಕಳೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದನದಲ್ಲಿ ನಿರಂತರ ಹಕ್ಕೋತಾಯದ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಆರು ತಿಂಗಳೊಳಗಾಗಿ ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಈಗ ಸೆಪ್ಟೆಂಬರ್ 15ಕ್ಕೆ ಆರು ತಿಂಗಳ ಅವಧಿ ಮುಗಿಯುವುದರೊಳಗೆ ಮೀಸಲಾತಿ ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ರಮೇಶ ಗೌಡ ಪಾಟೀಲ, ತಾಲೂಕು ಅದ್ಯಕ್ಷ ಅವಿನಾಶ ನಾಯಿಕ , ಯುವ ಘಟಕದ ಅಧ್ಯಕ್ಷ ಪರಶುರಾಮ ನಂದೇಶ್ವರ , ಮಹಿಳಾ ಘಟಕದ ಅದ್ಯಕ್ಷ ರೋಹಿಣಿ ಸಂಜೀವ ವಾಂಗಿ , ಮುಖಂಡರಾದ ಮುತ್ತಣ್ಣಾ ಸಂತ್ತಿ ,ಚಿದಾನಂದ ಪಾಟೀಲ ,ಶೀವು ಸಂಕ , ಶೀವಗೌಡಾ ನೇಮಗೌಡ,ಶೀವು  ಸಿಂದೂರ,ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು