1:01 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು