4:54 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು