6:12 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು