2:07 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮೂಗು ತೂರಿದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಿಸುತ್ತೇವೆ: ಅಮೆರಿಕಾಕ್ಕೆ ರಷ್ಯಾ ಎಚ್ಚರಿಕೆ

06/03/2022, 13:24

ಮಾಸ್ಕೋ(reporterkarnataka.com): ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಸದ್ಯ ಶಮನವಾಗುವ ಲಕ್ಷಣ ಕಂಡು ಬರುತ್ತಿಲ್ಲ. ಉಕ್ರೇನ್‌ ನಡುವಿನ ತನ್ನ ವಿವಾದದಲ್ಲಿ ಪಾಶ್ಚಿಮಾತ್ಯ ದೇಶಗಳು ಮೂಗುತೂರಿಸುವುದನ್ನು ನಿಲ್ಲಿಸದಿದ್ದರೆ ಉಕ್ರೇನ್ ಗಡಿಯಾಚೆಗೂ ಯುದ್ಧ ವಿಸ್ತರಣೆಯಾಗಬಹುದು ಎಂದು ರಷ್ಯಾ ಎಚ್ಚರಿಕೆ ನೀಡಿದೆ.

ರಷ್ಯಾ ಈಗಾಗಲೇ ಉಕ್ರೇನ್ ರಾಜಧಾನಿ ಕೀವ್ ಮತ್ತು ಪ್ರಮುಖ ನಗರ ಖಾರ್ಕಿವ್​ ಸೇರಿದಂತೆ ಊಕ್ರೇನ್‌ ನ ಹಲವಾರು ನಗರಗಳನ್ನು ವಶಕ್ಕೆ ಪಡೆದಿದೆ.

ಪ್ರಬಲ ರಾಷ್ಟ್ರವಾದ ರಷ್ಯಾದ ಎದುರು ಪುಟ್ಟ ದೇಶ ಉಕ್ರೇನ್‌ ದಿಟ್ಟತನದಿಂದ ಹೋರಾಡುತ್ತಿರುವುದರ ಹಿಂದೆ ಅಮೆರಿಕ, ಇಂಗ್ರೆಂಡ್‌, ಜರ್ಮನಿ ಸೇರಿದಂತೆ ಹಲವು ಬಲಾಢ್ಯ ಪಾಶ್ಚಿಮಾತ್ಯ ದೇಶಗಳಿವೆ. ಈ ದೇಶಗಳು ಉಕ್ರೇನ್‌ ಗೆ ಶಾಸ್ತ್ರಾಸ್ತ್ರ ಪೂರೈಕೆ, ಸೈನಿಕ ನೆರವು, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಬೆಂಬಲವಾಗಿನಿಂತಿವೆ. ಜೊತೆಗೆ ರಷ್ಯಾ ವಿರುದ್ಧ ಕಠಿಣ ನಿರ್ಬಂಧಗಳನ್ನು ವಿಧಿಸುವ ಮೂಲಕ ರಷ್ಯಾವನ್ನು ಜಾಗತಿಕವಾಗಿ ಏಂಕಾಂಗಿಯಾಗಿಸುವ ಪ್ರಯತ್ನದಲ್ಲಿ ತೊಡಗಿವೆ. ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲವಾಗಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಪಾಶ್ಚಿಮಾತ್ಯ ದೇಶಗಳು ಉಕ್ರೇನ್-ರಷ್ಯಾ ವಿವಾದದಲ್ಲಿ ಮಧ್ಯಪ್ರವೇಶಿಸುವುದು ನಿಲ್ಲಿಸದಿದ್ದರೆ ಯುದ್ಧ ಉಕ್ರೇನ್ ಗಡಿಯಾಚೆಗೂ ವಿಸ್ತರಿಸಬಹುದು ಎಂದು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು