2:51 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

ಮುಹಿಯುದ್ದೀನ್ ಶಿಕ್ಷಣ ಸಂಸ್ಥೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಣೆ

20/07/2025, 23:16

ಬಂಟ್ವಾಳ(reporterkarnataka.com): ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿಸದೆ, ಪಾಠೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಸಲಾಂ ಹೇಳಿದರು.
ಅವರು ತುಂಬೆ ವಿದ್ಯಾ ಸಂಸ್ಥೆಗಳ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಿಸಿ ಮಾತನಾಡಿದರು.
ಪಿಟಿಎಯ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ ಮಾತನಾಡಿ ತುಂಬೆ ವಿದ್ಯಾ ಸಂಸ್ಥೆಯು ಕಳೆದ ಮೂರ್ನಾಲ್ಕು ದಶಕಗಳಿಂದ ಬಹಳ ಉತ್ತಮವಾದ ವಿದ್ಯಾರ್ಥಿಗಳನ್ನು ರೂಪಿಸಿ ನಾಗರಿಕರನ್ನಾಗಿ ಮಾಡುವಲ್ಲಿ ಯಶಸ್ಸನ್ನು ಕಂಡಿದೆ ಎಂದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಮಾತನಾಡಿದರು.
ಪ್ರಾಂಶುಪಾಲರಾದ ವಿ.ಎಸ್.ಭಟ್ ಪ್ರಸ್ತಾವನೆ ಗೈದರು. ಎಂ.ಇ.ಟಿ.ಮ್ಯಾನೇಜರ್ ಬಿ. ಅಬ್ದುಲ್ ಕಬೀರ್ ವಿಚಾರ ಮಂಡಿಸಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಡಳಿತಾಧಿಕಾರಿ ಕಿಶೋರ್ ಸುವರ್ಣ,
ಪಿಟಿಎ ಉಪಾಧ್ಯಕ್ಷೆ ಮೋಹಿನಿ ಎಂ.ಸುವರ್ಣ, ಮ್ಯಾಕ್ಸಿಂ ಕುವೆಲ್ಲೋ, ಚಂಚಲಾಕ್ಷಿ ಉಪಸ್ಥಿತರಿದ್ದರು.
ವಿದ್ಯಾ ಕೆ. ಸ್ವಾಗತಿಸಿ, ಮಲ್ಲಿಕಾ ಶೆಟ್ಟಿ ವಂದಿಸಿದರು. ವಿಮಲಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು