11:16 PM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಮುಹಿಯುದ್ದೀನ್ ಶಿಕ್ಷಣ ಸಂಸ್ಥೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಣೆ

20/07/2025, 23:16

ಬಂಟ್ವಾಳ(reporterkarnataka.com): ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಎಂಬ ನಾಲ್ಕು ಮುಖ್ಯ ಆಧಾರ ಸ್ಥಂಭಗಳು ಅನ್ಯೋನ್ಯವಾಗಿದ್ದಾಗ ಸಂಸ್ಥೆಯ ವಿದ್ಯಾರ್ಥಿಗಳು ನಾಗರಿಕರಾಗುತ್ತಾರೆ. ವಿದ್ಯಾರ್ಥಿಗಳು ಕೇವಲ ಅಂಕೆಗಳನ್ನು ಪಡೆಯುವುದನ್ನು ಉದ್ದೇಶವಾಗಿರಿಸದೆ, ಪಾಠೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಎಂದು ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ಸಲಾಂ ಹೇಳಿದರು.
ಅವರು ತುಂಬೆ ವಿದ್ಯಾ ಸಂಸ್ಥೆಗಳ ರಕ್ಷಕ-ಶಿಕ್ಷಕ ಸಂಘದ ಮಹಾ ಸಭೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತುಂಬೆ ಪಿಟಿಎಯ ದತ್ತಿ ನಿಧಿ ಸ್ಕಾಲರ್ ಶಿಪ್ ವಿತರಿಸಿ ಮಾತನಾಡಿದರು.
ಪಿಟಿಎಯ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಚಂದ್ರ ರೈ ದೇವಸ್ಯ ಮಾತನಾಡಿ ತುಂಬೆ ವಿದ್ಯಾ ಸಂಸ್ಥೆಯು ಕಳೆದ ಮೂರ್ನಾಲ್ಕು ದಶಕಗಳಿಂದ ಬಹಳ ಉತ್ತಮವಾದ ವಿದ್ಯಾರ್ಥಿಗಳನ್ನು ರೂಪಿಸಿ ನಾಗರಿಕರನ್ನಾಗಿ ಮಾಡುವಲ್ಲಿ ಯಶಸ್ಸನ್ನು ಕಂಡಿದೆ ಎಂದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ನಿಸಾರ್ ಅಹಮದ್ ವಳವೂರು ಮಾತನಾಡಿದರು.
ಪ್ರಾಂಶುಪಾಲರಾದ ವಿ.ಎಸ್.ಭಟ್ ಪ್ರಸ್ತಾವನೆ ಗೈದರು. ಎಂ.ಇ.ಟಿ.ಮ್ಯಾನೇಜರ್ ಬಿ. ಅಬ್ದುಲ್ ಕಬೀರ್ ವಿಚಾರ ಮಂಡಿಸಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೈಕ್ಷಣಿಕ ಸಾಧನೆ ಮಾಡಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಆಡಳಿತಾಧಿಕಾರಿ ಕಿಶೋರ್ ಸುವರ್ಣ,
ಪಿಟಿಎ ಉಪಾಧ್ಯಕ್ಷೆ ಮೋಹಿನಿ ಎಂ.ಸುವರ್ಣ, ಮ್ಯಾಕ್ಸಿಂ ಕುವೆಲ್ಲೋ, ಚಂಚಲಾಕ್ಷಿ ಉಪಸ್ಥಿತರಿದ್ದರು.
ವಿದ್ಯಾ ಕೆ. ಸ್ವಾಗತಿಸಿ, ಮಲ್ಲಿಕಾ ಶೆಟ್ಟಿ ವಂದಿಸಿದರು. ವಿಮಲಾ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು