2:48 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಮುಜರಾಯಿ ಇಲಾಖೆಯ ಅನುದಾನ; 95 ಲಕ್ಷ ರೂ. ವೆಚ್ಚದಲ್ಲಿ ಬಳ್ಳಾರಿ ನಗರದ ವಿವಿಧ ದೇವಸ್ಥಾನಗಳ ಅಭಿವೃದ್ಧಿ: ಶಾಸಕ ನಾರಾ ಭರತ್ ರೆಡ್ಡಿ

13/08/2024, 15:27

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯ ಕೆಹೆಚ್ ಬಿ ಕಾಲೋನಿಯ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನ ನಿರ್ಮಾಣದ ಬಾಕಿ ಉಳಿದಿರುವ ಕಾಮಗಾರಿಯನ್ನು ಅಂದಾಜು 5 ಲಕ್ಷ ರೂ.ಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿಯ ಗಾಂಧಿ ನಗರದ ಕೆಹೆಚ್ ಬಿ ಕಾಲೋನಿಯ ಕೆರೆಯ ಬಳಿ ಇರುವ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಬಳಿ ನಡೆದ ವಾರ್ಡಿನ ಜನರನ್ನುದ್ಧೇಶಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ನಗರದ 16ನೇ ವಾರ್ಡ್ ಹಾಗೂ 3ನೇ ವಾರ್ಡಿಗೆ ಭೇಟಿ ನೀಡಿ 16ನೇ ವಾರ್ಡಿನ ಶ್ರೀ ಪಾಂಡುರಂಗ ದೇವಸ್ಥಾನ ಹಾಗೂ ಶ್ರೀ ರಾಮ ದೇವಸ್ಥಾನಗಳಿಗೆ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯಿಂದ ತಲಾ 20 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭ ವಾರ್ಡಿನ ಹಿರಿಯರು ಹಾಜರಿದ್ದರು.
ಅದೇ ರೀತಿ 3ನೇ ವಾರ್ಡಿನ ಶ್ರೀ ರಾಧಾಕೃಷ್ಣ ದೇವಸ್ಥಾನಕ್ಕೆ 50 ಲಕ್ಷ ರೂ.ಗಳು ಮಂಜೂರಾಗಿದ್ದು, ಶೀಘ್ರ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ವೇಳೆ ವಾರ್ಡಿನ ಪ್ರಮುಖರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತಿರುವ 22ನೇ ವಾರ್ಡಿನ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದ ಗೋಪುರ ಕೆಲಸವನ್ನು ನಾನು ಪೂರ್ಣಗೊಳಿಸುವೆ. ಗೋಪುರ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಮುಜರಾಯಿ ಇಲಾಖೆಯಿಂದ ಈಗಾಗಲೇ ಮಂಜೂರಾಗಿದ್ದು, ಆದಷ್ಟು ಬೇಗ ದೇವಸ್ಥಾನ ಪೂರ್ಣಗೊಳಿಸೋಣ ಎಂದರು.
22ನೇ ವಾರ್ಡಿಗೆ ಸಂಬಂಧಿಸಿದ ಯಾವುದೇ ಕೆಲಸಗಳಿದ್ದರೂ ಸ್ಥಳೀಯ ಮುಖಂಡರಾದ ಬಜ್ಜಪ್ಪ ಹಾಗೂ ದುರ್ಗಾ ಮೋಹನ್ ಅವರಿಗೆ ತಿಳಿಸಿ ಎಂದು ಹೇಳಿದ ಶಾಸಕ ಭರತ್ ರೆಡ್ಡಿ, ವಾರ್ಡಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧ ಎಂದರು.
ಈ ವೇಳೆ ಶ್ರೀ ಮಹರ್ಷಿ ವಾಲ್ಮೀಕಿ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ರಾಂಪ್ರಸಾದ್, ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಬಜ್ಜಪ್ಪ, ದುರ್ಗಾ ಮೋಹನ್ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು