7:16 PM Monday23 - September 2024
ಬ್ರೇಕಿಂಗ್ ನ್ಯೂಸ್
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು