12:43 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು