7:24 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು