8:51 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ…

ಇತ್ತೀಚಿನ ಸುದ್ದಿ

ಮುಕ್ಕೋಟಿ ದ್ವಾದಶಿ: ಬಂಟ್ವಾಳದಲ್ಲಿ ಶ್ರೀ ದೇವರ ಸಹಿತ ಕಾಶೀ ಮಠಾಧೀಶರ ತೀರ್ಥ ಸ್ನಾನ

15/12/2021, 18:49

ಚಿತ್ರ : ಮಂಜು ನೀರೇಶ್ವಾಲ್ಯ ​​ಮಂಗಳೂರು(reporterkarnataka.com) : 

ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ​ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು.​ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಶ್ರೀ ದೇವರ ​ನೇತ್ರಾವತಿ ನದಿಯಲ್ಲಿ  ತೀರ್ಥ ಸ್ನಾನ​ ನಡೆಯಿತು.

ಬುಧವಾರ ವೈಕುಂಠ ಏಕಾದಶಿ ವೈಭವ ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ​ ​ಹಗಲು ಪೇಟೆ ಉತ್ಸವ ​ಬಳಿಕ ರಥೋತ್ಸವ ಜರಗಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಆ ದಿನದಂದು ವೈಕುಂಠದ ಉತ್ತರ ದ್ವಾರ ತೆರೆಯುತ್ತದೆ. ದೇವತೆಗಳೆಲ್ಲ ಮಹಾವಿಷ್ಣುವಿನ ದರ್ಶನ ಪಡೆಯುವ ಸಲುವಾಗಿ ಆ ದ್ವಾರದ ಮೂಲಕ ತೆರಳುತ್ತಾರೆ. ಆದ್ದರಿಂದ ದೇವಾಲಯಗಳ ಉತ್ತರ ದಿಕ್ಕಿನ ದ್ವಾರಗಳನ್ನು ತೆರೆಯಲಾಗುತ್ತದೆ. ಆ ಮೂಲಕ ದರ್ಶನ ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು