11:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮುಕ್ಕೋಟಿ ದ್ವಾದಶಿ: ಬಂಟ್ವಾಳದಲ್ಲಿ ಶ್ರೀ ದೇವರ ಸಹಿತ ಕಾಶೀ ಮಠಾಧೀಶರ ತೀರ್ಥ ಸ್ನಾನ

15/12/2021, 18:49

ಚಿತ್ರ : ಮಂಜು ನೀರೇಶ್ವಾಲ್ಯ ​​ಮಂಗಳೂರು(reporterkarnataka.com) : 

ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ​ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು.​ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಶ್ರೀ ದೇವರ ​ನೇತ್ರಾವತಿ ನದಿಯಲ್ಲಿ  ತೀರ್ಥ ಸ್ನಾನ​ ನಡೆಯಿತು.

ಬುಧವಾರ ವೈಕುಂಠ ಏಕಾದಶಿ ವೈಭವ ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ​ ​ಹಗಲು ಪೇಟೆ ಉತ್ಸವ ​ಬಳಿಕ ರಥೋತ್ಸವ ಜರಗಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಆ ದಿನದಂದು ವೈಕುಂಠದ ಉತ್ತರ ದ್ವಾರ ತೆರೆಯುತ್ತದೆ. ದೇವತೆಗಳೆಲ್ಲ ಮಹಾವಿಷ್ಣುವಿನ ದರ್ಶನ ಪಡೆಯುವ ಸಲುವಾಗಿ ಆ ದ್ವಾರದ ಮೂಲಕ ತೆರಳುತ್ತಾರೆ. ಆದ್ದರಿಂದ ದೇವಾಲಯಗಳ ಉತ್ತರ ದಿಕ್ಕಿನ ದ್ವಾರಗಳನ್ನು ತೆರೆಯಲಾಗುತ್ತದೆ. ಆ ಮೂಲಕ ದರ್ಶನ ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು