7:51 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮುಕ್ಕೋಟಿ ದ್ವಾದಶಿ: ಬಂಟ್ವಾಳದಲ್ಲಿ ಶ್ರೀ ದೇವರ ಸಹಿತ ಕಾಶೀ ಮಠಾಧೀಶರ ತೀರ್ಥ ಸ್ನಾನ

15/12/2021, 18:49

ಚಿತ್ರ : ಮಂಜು ನೀರೇಶ್ವಾಲ್ಯ ​​ಮಂಗಳೂರು(reporterkarnataka.com) : 

ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ​ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು.​ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಶ್ರೀ ದೇವರ ​ನೇತ್ರಾವತಿ ನದಿಯಲ್ಲಿ  ತೀರ್ಥ ಸ್ನಾನ​ ನಡೆಯಿತು.

ಬುಧವಾರ ವೈಕುಂಠ ಏಕಾದಶಿ ವೈಭವ ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ​ ​ಹಗಲು ಪೇಟೆ ಉತ್ಸವ ​ಬಳಿಕ ರಥೋತ್ಸವ ಜರಗಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಆ ದಿನದಂದು ವೈಕುಂಠದ ಉತ್ತರ ದ್ವಾರ ತೆರೆಯುತ್ತದೆ. ದೇವತೆಗಳೆಲ್ಲ ಮಹಾವಿಷ್ಣುವಿನ ದರ್ಶನ ಪಡೆಯುವ ಸಲುವಾಗಿ ಆ ದ್ವಾರದ ಮೂಲಕ ತೆರಳುತ್ತಾರೆ. ಆದ್ದರಿಂದ ದೇವಾಲಯಗಳ ಉತ್ತರ ದಿಕ್ಕಿನ ದ್ವಾರಗಳನ್ನು ತೆರೆಯಲಾಗುತ್ತದೆ. ಆ ಮೂಲಕ ದರ್ಶನ ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು