1:36 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಮುಕ್ಕೋಟಿ ದ್ವಾದಶಿ: ಬಂಟ್ವಾಳದಲ್ಲಿ ಶ್ರೀ ದೇವರ ಸಹಿತ ಕಾಶೀ ಮಠಾಧೀಶರ ತೀರ್ಥ ಸ್ನಾನ

15/12/2021, 18:49

ಚಿತ್ರ : ಮಂಜು ನೀರೇಶ್ವಾಲ್ಯ ​​ಮಂಗಳೂರು(reporterkarnataka.com) : 

ಕರಾವಳಿಯ ಪುಣ್ಯಕ್ಷೇತ್ರಗಳಲ್ಲೊಂದಾದ ​ಬಂಟ್ವಾಳದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ‘ಮುಕ್ಕೋಟಿ ದ್ವಾದಶಿ’ ಉತ್ಸವ ಗಮನಸೆಳೆಯಿತು.​ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಶ್ರೀ ದೇವರ ​ನೇತ್ರಾವತಿ ನದಿಯಲ್ಲಿ  ತೀರ್ಥ ಸ್ನಾನ​ ನಡೆಯಿತು.

ಬುಧವಾರ ವೈಕುಂಠ ಏಕಾದಶಿ ವೈಭವ ಇಂದು ಪ್ರಾತಃಕಾಲ ಶ್ರೀನಿವಾಸ ದೇವರ ಪಲ್ಲಕಿ ಉತ್ಸವವು ಭಕ್ತಸಮೂಹದ ಕಣ್ಮನ ಸೆಳೆಯಿತು. ಬಳಿಕ ಶ್ರೀ ದೇವರ ಸ್ವಯಂಸೇವಕರ ಭುಜ ಸೇವೆಯೊಂದಿಗೆ​ ​ಹಗಲು ಪೇಟೆ ಉತ್ಸವ ​ಬಳಿಕ ರಥೋತ್ಸವ ಜರಗಿತು.

ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಆ ದಿನದಂದು ವೈಕುಂಠದ ಉತ್ತರ ದ್ವಾರ ತೆರೆಯುತ್ತದೆ. ದೇವತೆಗಳೆಲ್ಲ ಮಹಾವಿಷ್ಣುವಿನ ದರ್ಶನ ಪಡೆಯುವ ಸಲುವಾಗಿ ಆ ದ್ವಾರದ ಮೂಲಕ ತೆರಳುತ್ತಾರೆ. ಆದ್ದರಿಂದ ದೇವಾಲಯಗಳ ಉತ್ತರ ದಿಕ್ಕಿನ ದ್ವಾರಗಳನ್ನು ತೆರೆಯಲಾಗುತ್ತದೆ. ಆ ಮೂಲಕ ದರ್ಶನ ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು