9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ: ವಿನಯ ಕುಮಾರ್ ಸೊರಕೆ

21/09/2021, 14:39

ಉಡುಪಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೆಸ್ಸೆಸ್ ಸಂಘಟನೆಯಿಂದ ಬಂದವರಲ್ಲ. ಬಿಜೆಪಿಗೆ ಬೇಕಾಗಿರುವುದು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ತರಹದ ನಾಯಕರು. ಹಾಗಾಗಿ ಬೊಮ್ಮಾಯಿ ಅವರು ಸಿಎಂ ಹುದ್ದೆಯಲ್ಲಿ ಎಷ್ಟು ದಿನ ಮುಂದುವರಿಯುತ್ತಾರೆ ಎಂದು ಹೇಳುವುದು ಕಷ್ಟ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಬೊಮ್ಮಾಯಿ ಅವರ ಜಾತ್ಯತೀತ ಮನೋಭಾವವನ್ನು ಬಿಜೆಪಿ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮೂಲತಃ ಜನತಾ ದಳದಿಂದ ಬಂದ ಅವರು ಒಂದು ಸಂದರ್ಭದಲ್ಲಿ ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದರು. ಅವರ ತಂದೆ ಜನತಾ ದಳದ ನಾಯಕರು ಎಂದು ಉಡುಪಿ ಜಿಲ್ಲೆಯ ಪೆರ್ಡೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಧರ್ಮ- ದೇವರ ಬಗ್ಗೆ ಇತರರಿಗೆ ಪಾಠ ಹೇಳುವ ಬಿಜೆಪಿಯು ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದೆ. ಸರಕಾರ ಹೇಳದೆ ಯಾವುದಾದರು ಅಧಿಕಾರಿಗಳು ದೇಗುಲ ಒಡೆಯಲು ಸಾಧ್ಯವೇ ಎಂದು ಸೊರಕೆ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು