10:14 PM Tuesday23 - December 2025
ಬ್ರೇಕಿಂಗ್ ನ್ಯೂಸ್
ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು