1:48 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು