6:20 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ: ರಸ್ತೆಗಳ ಶೃಂಗಾರ; ಜನತಾ ಪರಿವಾರದ ಮಾಜಿ ನಾಯಕನ ಸ್ವಾಗತಕ್ಕೆ ಬಿಜೆಪಿ ಬಾವುಟ !!

11/08/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರ ಸ್ವಾಗತಕ್ಕೆ ಭಾರಿ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾರ್ಯ ತರಾತುರಿಯಿಂದ ನಡೆದಿದೆ. ಏರ್ ಪೋರ್ಟ್ ರೋಡ್ ಹಾಗೂ ಸಿಎಂ ಹಾದು ಹೋಗುವ ರಸ್ತೆಗಳಿಗೆ ಬಿಜೆಪಿ ಬಾವುಟ ಹಾರಿಸಿ ಶೃಂಗರಿಸಲಾಗಿದೆ.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಪ್ಲೈಟ್ ನಲ್ಲಿ ಗುರುವಾರ(ಆ.12) ಬೆಳಗ್ಗೆ 10.50ಕ್ಕೆ ಮುಖ್ಯಮಂತ್ರಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಆಗಮಿಸುವರು. ಅಲ್ಲಿಂದ ಅವರು ರಸ್ತೆ ಮೂಲಕ ಸರ್ಕಿಟ್ ಹೌಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಬಗ್ಗೆ ಅವಲೋಕನ ಸಭೆ ನಡೆಸಲು ಉರ್ವ ಬಳಿಯಿರುವ ಜಿಪಂ ಕಚೇರಿಗೆ ಆಗಮಿಸುವರು. ಅದಕ್ಕಾಗಿ ತರಾತುರಿಯಲ್ಲಿ ಏರ್ ಪೋರ್ಟ್ ರೋಡ್ ತೇಪೆ ಕಾರ್ಯ ಬುಧವಾರ ನಡೆದಿದೆ. ಹಾಗೆ ಜಿಪಂ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಭಾರಿ ತಯಾರಿ ನಡೆಸಲಾಗಿದೆ. ಸಭಾಂಗಣ ವೇದಿಕೆ ಹಿಂದುಗಡೆ ದೊಡ್ಡ ಅಕ್ಷರದಲ್ಲಿ ಮುಖ್ಯಮಂತ್ರಿಯ ಹೆಸರು ಬರೆಯಲಾಗಿದೆ. ಸಭಾಂಗಣದ ಸಿದ್ಧತೆಯನ್ನು ಸ್ವತಃ ಜಿಲ್ಲಾಧಿಕಾರಿಯವರೇ ಬುಧವಾರ ಅವಲೋಕನ ನಡೆಸಿದ್ದಾರೆ. ಲೋಪದೋಷ ಕುರಿತು ಜಿಲ್ಲಾಧಿಕಾರಿಯವರು ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿದ್ದಾರೆ. ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ಸಿದ್ದಗೊಂಡಿರುವ 32 ಬೆಡ್ ಗಳ ಐಸಿಯು ವಿಭಾಗವನ್ನು ಮುಖ್ಯಮಂತ್ರಿ ಉದ್ಘಾಟಿಸುವರು.


ಮುಖ್ಯಮಂತ್ರಿಯವರಿಗೆ ಮಧ್ಯಾಹ್ನದ ಬಳಿಕ ಉಡುಪಿಯಲ್ಲೂ ಕಾರ್ಯಕ್ರಮವಿದೆ. ಅಲ್ಲೂ ಅವರು ಕೋವಿಡ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಗುರುವಾರ ರಾತ್ರಿ ಮಂಗಳೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ತಂಗಲು ಮಂಗಳೂರಿನ ಸರ್ಕಿಟ್ ಹೌಸ್ ಹಾಗೂ ಖಾಸಗಿ ಹೋಟೆಲ್ ವೊಂದರಲ್ಲಿ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಿಎಂ ಅವರಿಗೆ ಕರಾವಳಿ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು