4:56 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು