6:09 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು