4:16 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಪೊಳಲಿ ರಾಜ ರಾಜೇಶ್ವರಿ ದೇಗುಲಕ್ಕೆ ಭೇಟಿ: ಮಂಗಳೂರಿನಲ್ಲಿ ವಾಸ್ತವ್ಯ

11/04/2022, 21:29

ಮಂಗಳೂರು(reporterkarnataka.com): ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಏ. 12ರ ಮಂಗಳವಾರ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ ರಾಜ ರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು

ಬೊಮ್ಮಾಯಿ ಅವರು 12 ಮತ್ತು 13ರಂದು ಜಿಲ್ಲೆಯ ಪ್ರವಾಸ ಕೈಗೊಳ್ಳುವರು.

12ರಂದು ಬೆಳಿಗ್ಗೆ ಉಡುಪಿಯ ಮಣಿಪಾಲ್‍ನಿಂದ ಬೆಳಿಗ್ಗೆ 9 ಗಂಟೆಗೆ ಮಂಗಳೂರಿಗೆ ಆಗಮಿಸುವರು.

ಬೆಳಿಗ್ಗೆ 9 ರಿಂದ ರಾತ್ರಿ 7 ಗಂಟೆಯ ವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು. ರಾತ್ರಿ 7.30ಕ್ಕೆ ಮಂಗಳೂರಿನಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ರಾತ್ರಿ 8.15ಕ್ಕೆ ಬಂಟ್ವಾಳ ತಾಲೂಕಿನ ಪೊಳಲಿ

ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. 8.45ಕ್ಕೆ ಅಲ್ಲಿಂದ ಹಿಂತಿರುಗಿ ರಾತ್ರಿ 9.15ಕ್ಕೆ ಮಂಗಳೂರಿಗೆ ಆಗಮಿಸಿ, ನಗರದಲ್ಲಿ ವಾಸ್ತವ್ಯ ಮಾಡುವರು.

ಏ.13ರ ಬುಧವಾರ ಬೆಳಿಗ್ಗೆ 8.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಬಂಟ್ವಾಳಕ್ಕೆ ತೆರಳಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಸಭೆಗಳಲ್ಲಿ ಭಾಗವಹಿಸುವರು.

ಮಧ್ಯಾಹ್ನ 12.30ಕ್ಕೆ ಬಂಟ್ವಾಳದಿಂದ ರಸ್ತೆ ಮಾರ್ಗವಾಗಿ ನಿರ್ಗಮಿಸಿ 1.05ಕ್ಕೆ ಬಜಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 1.40ಕ್ಕೆ ವಿಮಾನದ ಮೂಲಕ ಹೊರಟು ಮಧ್ಯಾಹ್ನ 2.35ಕ್ಕೆ ಬೆಂಗಳೂರು ತಲುಪುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು